ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
Cross references
ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.