ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
Cross references
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.