ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
Cross references
ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.