Home Bibles ಪ್ರಕಟನೆ 7:2 · ಕನ್ನಡ ಬೈಬಲ್
ಪ್ರಕಟನೆ 7:2 · ಕನ್ನಡ ಬೈಬಲ್

ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

Cross references

ದ್ವಿತೀಯೋಪದೇಶಕಾಂಡ 5:26

ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?

1 ಸಮುವೇಲ 17:26

ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.

1 ಸಮುವೇಲ 17:36

ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.

2 ಅರಸುಗಳು 19:4

ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.

ಪರಮಗೀತ 8:6

ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.

ಮಲಾಕಿ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯ 26:63

ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

ಯೋಹಾನ 6:27

ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಅಪೋಸ್ತಲರ ಕೃತ್ಯಗಳು 7:30

ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

2 ಕೊರಿಂಥದವರಿಗೆ 1:22

ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 1:13

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಎಫೆಸದವರಿಗೆ 4:30

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

1 ತೆಸಲೋನಿಕದವರಿಗೆ 1:9

ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

2 ತಿಮೋಥೆಯ 2:19

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ಹೆಬ್ರಿಯರಿಗೆ 12:22

ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ

ಪ್ರಕಟನೆ 1:3

ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.

ಪ್ರಕಟನೆ 5:2

ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.

ಪ್ರಕಟನೆ 7:3

ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

ಪ್ರಕಟನೆ 8:3

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ಪ್ರಕಟನೆ 8:7

ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

ಪ್ರಕಟನೆ 9:4

ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

ಪ್ರಕಟನೆ 10:1

ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

ಪ್ರಕಟನೆ 10:4

ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.

Interlinear

Choose Theme