Home Bibles ಪ್ರಕಟನೆ 8:3 · ಕನ್ನಡ ಬೈಬಲ್
ಪ್ರಕಟನೆ 8:3 · ಕನ್ನಡ ಬೈಬಲ್

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

Cross references

ಆದಿಕಾಂಡ 48:15

ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

ನಿರ್ಗಮಕಾಂಡ 3:2

ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.

ನಿರ್ಗಮಕಾಂಡ 30:1

ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.

ನಿರ್ಗಮಕಾಂಡ 37:25

ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.

ನಿರ್ಗಮಕಾಂಡ 40:26

ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.

ಲೇವ್ಯಕಾಂಡ 16:12

ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.

ಅಂಕೆಗಳ ಪುಸ್ತಕ 16:46

ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

1 ಅರಸುಗಳು 7:50

ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

2 ದಿನವೃತ್ತಾಂತ 26:16

ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

ಕೀರ್ತನೆಗಳು 141:2

ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.

ಆಮೋಸ 9:1

ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.

ಮಲಾಕಿ 1:11

ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಲೂಕ 1:10

ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 7:30

ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

ರೋಮಾಪುರದವರಿಗೆ 8:34

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ಹೆಬ್ರಿಯರಿಗೆ 7:25

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

ಹೆಬ್ರಿಯರಿಗೆ 9:4

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

1 ಯೋಹಾನ 2:1

ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

ಪ್ರಕಟನೆ 5:8

ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

ಪ್ರಕಟನೆ 6:9

ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.

ಪ್ರಕಟನೆ 7:2

ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

ಪ್ರಕಟನೆ 8:4

ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.

ಪ್ರಕಟನೆ 9:13

ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.

ಪ್ರಕಟನೆ 10:1

ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

Interlinear

Choose Theme