ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
Cross references
ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;