ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
Cross references
ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.