ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
Cross references
ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.