ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
Cross references
ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.