ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
Cross references
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ