ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
Cross references
ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.