ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Cross references
ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.