ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
Cross references
ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.