ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
Cross references
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ