Home Bibles ರೋಮಾಪುರದವರಿಗೆ 11:15 · ಕನ್ನಡ ಬೈಬಲ್
ರೋಮಾಪುರದವರಿಗೆ 11:15 · ಕನ್ನಡ ಬೈಬಲ್

ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.

Cross references

ಯೆಹೆಜ್ಕೇಲ 37:1

ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಲೂಕ 15:24

ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.

ಲೂಕ 15:32

ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ರೋಮಾಪುರದವರಿಗೆ 5:10

ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 11:1

ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.

ರೋಮಾಪುರದವರಿಗೆ 11:11

ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

2 ಕೊರಿಂಥದವರಿಗೆ 5:18

ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 1:10

ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

ಕೊಲೊಸ್ಸೆಯವರಿಗೆ 1:20

ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

ಪ್ರಕಟನೆ 11:11

ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

ಪ್ರಕಟನೆ 20:4

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ

Interlinear

Choose Theme