ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
Cross references
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.