ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
Cross references
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.