ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
Cross references
ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,