Home Bibles ರೋಮಾಪುರದವರಿಗೆ 13:9 · ಕನ್ನಡ ಬೈಬಲ್
ರೋಮಾಪುರದವರಿಗೆ 13:9 · ಕನ್ನಡ ಬೈಬಲ್

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

Cross references

ನಿರ್ಗಮಕಾಂಡ 20:12

ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ಲೇವ್ಯಕಾಂಡ 19:18

ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.

ಲೇವ್ಯಕಾಂಡ 19:34

ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 5:16

ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.

ಮತ್ತಾಯ 19:18

ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.

ಮತ್ತಾಯ 22:39

ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.

ಮಾರ್ಕ 10:19

ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.

ಮಾರ್ಕ 12:31

ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.

ಲೂಕ 10:27

ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.

ಲೂಕ 18:20

ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.

ರೋಮಾಪುರದವರಿಗೆ 7:7

ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.

ಗಲಾತ್ಯದವರಿಗೆ 5:13

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ಯಾಕೋಬ 2:8

ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.

Interlinear

Choose Theme