ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
Cross references
ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು