Home Bibles ರೋಮಾಪುರದವರಿಗೆ 14:17 · ಕನ್ನಡ ಬೈಬಲ್
ರೋಮಾಪುರದವರಿಗೆ 14:17 · ಕನ್ನಡ ಬೈಬಲ್

ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

Cross references

ಯೆಶಾಯ 45:24

ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 55:12

ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಲೂಕ 14:15

ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.

ಲೂಕ 17:20

ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.

ಯೋಹಾನ 3:3

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

ಯೋಹಾನ 3:5

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 9:31

ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.

ಅಪೋಸ್ತಲರ ಕೃತ್ಯಗಳು 13:52

ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 8:6

ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.

ರೋಮಾಪುರದವರಿಗೆ 8:15

ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.

ರೋಮಾಪುರದವರಿಗೆ 15:13

ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.

1 ಕೊರಿಂಥದವರಿಗೆ 1:30

ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

1 ಕೊರಿಂಥದವರಿಗೆ 4:20

ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ಕೊರಿಂಥದವರಿಗೆ 8:8

ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಫಿಲಿಪ್ಪಿಯವರಿಗೆ 2:1

ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ

ಫಿಲಿಪ್ಪಿಯವರಿಗೆ 3:3

ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.

ಫಿಲಿಪ್ಪಿಯವರಿಗೆ 3:9

ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

ಫಿಲಿಪ್ಪಿಯವರಿಗೆ 4:4

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

ಫಿಲಿಪ್ಪಿಯವರಿಗೆ 4:7

ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಕೊಲೊಸ್ಸೆಯವರಿಗೆ 1:11

ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

ಕೊಲೊಸ್ಸೆಯವರಿಗೆ 2:16

ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.

1 ತೆಸಲೋನಿಕದವರಿಗೆ 1:6

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

1 ತೆಸಲೋನಿಕದವರಿಗೆ 2:12

ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.

ಹೆಬ್ರಿಯರಿಗೆ 13:9

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

1 ಪೇತ್ರ 1:8

ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

2 ಪೇತ್ರ 1:1

ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

Interlinear

Choose Theme