ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
Cross references
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--