ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
Cross references
ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ