ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.