ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
Cross references
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.