ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
Cross references
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.