ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
Cross references
ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.