Home Bibles ರೋಮಾಪುರದವರಿಗೆ 15:8 · ಕನ್ನಡ ಬೈಬಲ್
ರೋಮಾಪುರದವರಿಗೆ 15:8 · ಕನ್ನಡ ಬೈಬಲ್

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

Cross references

ಕೀರ್ತನೆಗಳು 98:2

ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

ಯೆಶಾಯ 24:15

ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.

ಮೀಕ 7:20

ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

ಮತ್ತಾಯ 15:24

ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

ಮತ್ತಾಯ 20:28

ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ಲೂಕ 1:54

ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.

ಲೂಕ 1:70

ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ

ಯೋಹಾನ 1:11

ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.

ಯೋಹಾನ 10:16

ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.

ಅಪೋಸ್ತಲರ ಕೃತ್ಯಗಳು 3:25

ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ರೋಮಾಪುರದವರಿಗೆ 3:3

ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?

ರೋಮಾಪುರದವರಿಗೆ 3:26

ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.

ರೋಮಾಪುರದವರಿಗೆ 4:16

ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ರೋಮಾಪುರದವರಿಗೆ 9:4

ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

ರೋಮಾಪುರದವರಿಗೆ 9:23

ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

ರೋಮಾಪುರದವರಿಗೆ 11:22

ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.

ರೋಮಾಪುರದವರಿಗೆ 11:30

ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ

ರೋಮಾಪುರದವರಿಗೆ 15:16

ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

1 ಕೊರಿಂಥದವರಿಗೆ 1:12

ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1 ಕೊರಿಂಥದವರಿಗೆ 10:19

ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

1 ಕೊರಿಂಥದವರಿಗೆ 10:29

ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

1 ಕೊರಿಂಥದವರಿಗೆ 15:50

ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.

2 ಕೊರಿಂಥದವರಿಗೆ 1:20

ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್‌ ಆಗಿವೆ.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

ಎಫೆಸದವರಿಗೆ 2:12

ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

Interlinear

Choose Theme