ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
Cross references
ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.