ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
Cross references
ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.