ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
Cross references
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?