ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
Cross references
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.