ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
Cross references
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.