ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
Cross references
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?