Home Bibles ರೋಮಾಪುರದವರಿಗೆ 2:9 · ಕನ್ನಡ ಬೈಬಲ್
ರೋಮಾಪುರದವರಿಗೆ 2:9 · ಕನ್ನಡ ಬೈಬಲ್

ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ

Cross references

ಸಾಮೇತಿಗಳು 1:27

ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.

ಯೆಹೆಜ್ಕೇಲ 18:4

ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.

ಆಮೋಸ 3:2

ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

ಮತ್ತಾಯ 11:20

ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

ಮತ್ತಾಯ 16:26

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

ಲೂಕ 2:30

ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.

ಲೂಕ 12:47

ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 3:26

ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 11:18

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 13:26

ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 18:5

ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 26:20

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಅಪೋಸ್ತಲರ ಕೃತ್ಯಗಳು 28:17

ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 2:10

ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.

ರೋಮಾಪುರದವರಿಗೆ 3:29

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

ರೋಮಾಪುರದವರಿಗೆ 4:9

ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

ರೋಮಾಪುರದವರಿಗೆ 9:24

ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?

ರೋಮಾಪುರದವರಿಗೆ 10:12

ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

ಗಲಾತ್ಯದವರಿಗೆ 2:15

ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.

ಗಲಾತ್ಯದವರಿಗೆ 3:28

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಎಫೆಸದವರಿಗೆ 2:11

ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.

ಕೊಲೊಸ್ಸೆಯವರಿಗೆ 3:11

ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.

2 ತೆಸಲೋನಿಕದವರಿಗೆ 1:6

ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ

1 ಪೇತ್ರ 4:17

ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

Interlinear

Choose Theme