ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
Cross references
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.