ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
Cross references
ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?