ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
Cross references
ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--