Home Bibles ರೋಮಾಪುರದವರಿಗೆ 3:24 · ಕನ್ನಡ ಬೈಬಲ್
ರೋಮಾಪುರದವರಿಗೆ 3:24 · ಕನ್ನಡ ಬೈಬಲ್

ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

Cross references

ಅಂಕೆಗಳ ಪುಸ್ತಕ 7:15

ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಮತ್ತಾಯ 20:28

ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ರೋಮಾಪುರದವರಿಗೆ 4:4

ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.

ರೋಮಾಪುರದವರಿಗೆ 4:16

ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ರೋಮಾಪುರದವರಿಗೆ 5:9

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 5:16

ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.

1 ಕೊರಿಂಥದವರಿಗೆ 1:30

ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

1 ಕೊರಿಂಥದವರಿಗೆ 6:11

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

ಎಫೆಸದವರಿಗೆ 1:6

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಎಫೆಸದವರಿಗೆ 2:7

ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.

ಕೊಲೊಸ್ಸೆಯವರಿಗೆ 1:14

ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.

1 ತಿಮೋಥೆಯ 2:6

ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ತೀತ 3:5

ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

ಹೆಬ್ರಿಯರಿಗೆ 9:2

ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme