ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
Cross references
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.