ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
Cross references
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.