Home Bibles ರೋಮಾಪುರದವರಿಗೆ 3:25 · ಕನ್ನಡ ಬೈಬಲ್
ರೋಮಾಪುರದವರಿಗೆ 3:25 · ಕನ್ನಡ ಬೈಬಲ್

ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

Cross references

ನಿರ್ಗಮಕಾಂಡ 25:17

ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

ಲೇವ್ಯಕಾಂಡ 16:15

ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.

ಕೀರ್ತನೆಗಳು 22:31

ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.

ಕೀರ್ತನೆಗಳು 40:10

ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.

ಕೀರ್ತನೆಗಳು 50:6

ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.

ಕೀರ್ತನೆಗಳು 97:6

ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.

ಕೀರ್ತನೆಗಳು 119:142

ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೋಹಾನ 6:47

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.

ಯೋಹಾನ 6:53

ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:18

ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ಅಪೋಸ್ತಲರ ಕೃತ್ಯಗಳು 13:38

ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

ಅಪೋಸ್ತಲರ ಕೃತ್ಯಗಳು 15:18

ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ರೋಮಾಪುರದವರಿಗೆ 3:23

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ರೋಮಾಪುರದವರಿಗೆ 3:26

ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.

ರೋಮಾಪುರದವರಿಗೆ 4:1

ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 5:9

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 5:11

ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.

ಕೊಲೊಸ್ಸೆಯವರಿಗೆ 1:20

ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

1 ತಿಮೋಥೆಯ 1:15

ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಹೆಬ್ರಿಯರಿಗೆ 9:5

ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.

ಹೆಬ್ರಿಯರಿಗೆ 9:14

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

ಹೆಬ್ರಿಯರಿಗೆ 9:25

ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.

ಹೆಬ್ರಿಯರಿಗೆ 10:4

ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

ಹೆಬ್ರಿಯರಿಗೆ 11:14

ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.

ಹೆಬ್ರಿಯರಿಗೆ 11:17

ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.

ಹೆಬ್ರಿಯರಿಗೆ 11:39

ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

1 ಯೋಹಾನ 1:10

ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

1 ಯೋಹಾನ 2:2

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.

1 ಯೋಹಾನ 4:10

ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

ಪ್ರಕಟನೆ 13:8

ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

Interlinear

Choose Theme