ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
Cross references
ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.