ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
Cross references
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.