Home Bibles ರೋಮಾಪುರದವರಿಗೆ 3:7 · ಕನ್ನಡ ಬೈಬಲ್
ರೋಮಾಪುರದವರಿಗೆ 3:7 · ಕನ್ನಡ ಬೈಬಲ್

ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?

Cross references

ಆದಿಕಾಂಡ 37:8

ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.

ಆದಿಕಾಂಡ 37:20

ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಆದಿಕಾಂಡ 44:1

ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.

ಆದಿಕಾಂಡ 50:18

ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.

ನಿರ್ಗಮಕಾಂಡ 3:19

ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

ನಿರ್ಗಮಕಾಂಡ 14:5

ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.

ನಿರ್ಗಮಕಾಂಡ 14:30

ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

1 ಅರಸುಗಳು 13:17

ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.

1 ಅರಸುಗಳು 13:26

ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.

2 ಅರಸುಗಳು 8:10

ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.

ಯೆಶಾಯ 10:6

ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

ಮತ್ತಾಯ 26:34

ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

ಮತ್ತಾಯ 26:69

ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ರೋಮಾಪುರದವರಿಗೆ 3:4

ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

ರೋಮಾಪುರದವರಿಗೆ 9:19

ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.

Interlinear

Choose Theme