ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
Cross references
ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.
ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.