ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
Cross references
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--