Home Bibles ರೋಮಾಪುರದವರಿಗೆ 4:6 · ಕನ್ನಡ ಬೈಬಲ್
ರೋಮಾಪುರದವರಿಗೆ 4:6 · ಕನ್ನಡ ಬೈಬಲ್

ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.

Cross references

ದ್ವಿತೀಯೋಪದೇಶಕಾಂಡ 33:29

ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

ಕೀರ್ತನೆಗಳು 1:1

ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

ಕೀರ್ತನೆಗಳು 112:1

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕೀರ್ತನೆಗಳು 146:5

ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಯೆಶಾಯ 45:24

ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 54:17

ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 22:6

ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

ಯೆರೆಮಿಯ 33:16

ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಮತ್ತಾಯ 5:3

ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ರೋಮಾಪುರದವರಿಗೆ 1:17

ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ರೋಮಾಪುರದವರಿಗೆ 3:20

ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

ರೋಮಾಪುರದವರಿಗೆ 3:27

ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.

ರೋಮಾಪುರದವರಿಗೆ 4:9

ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 4:24

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

ರೋಮಾಪುರದವರಿಗೆ 5:18

ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

1 ಕೊರಿಂಥದವರಿಗೆ 1:30

ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಗಲಾತ್ಯದವರಿಗೆ 3:8

ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಗಲಾತ್ಯದವರಿಗೆ 3:14

ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.

ಗಲಾತ್ಯದವರಿಗೆ 4:15

ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.

ಎಫೆಸದವರಿಗೆ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 2:8

ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಫಿಲಿಪ್ಪಿಯವರಿಗೆ 3:9

ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

2 ತಿಮೋಥೆಯ 1:9

ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.

2 ಪೇತ್ರ 1:1

ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

Interlinear

Choose Theme