ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
Cross references
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--