(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
Cross references
ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.